ಧಾರವಾಡ: ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಇನ್ಸಿಗ್ನಿಯಾ’ ಅಡಿ ಮ್ಯಾನೇಜ್ಮೆಂಟ್ ವಿಭಾಗದಿಂದ ಮ್ಯಾನೇಜ್ಮೆಂಟ್ ಕುರಿತು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
15 ಕಾಲೇಜಿನ 80ಕ್ಕೂ ಅಧಿಕ ವಿದ್ಯಾರ್ಥಿಗಳು 40 ತಂಡಗಳಾಗಿ ಭಾಗವಹಿಸಿದ್ದರು. ಮ್ಯಾನೇಜ್ಮೆಂಟ್ ಇವೆಂಟ್ಗಳು, ಬುದ್ಧಿಮತ್ತೆ, ಕಾರ್ಯ ನೈಪುಣ್ಯತೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ರಮೇಶ ಚಕ್ರಸಾಲಿ ಭಾಗವಹಿಸಿದ್ದರು. ಮ್ಯಾನೇಜ್ಮೆಂಟ್ ವಿಭಾಗದ ನಿರ್ದೇಶಕ ಪ್ರಕಾಶ್ ಎಚ್.ಎಸ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮ ಸಂಯೋಜಕ ಪ್ರೊ. ಪ್ರಶಾಂತ ಸಿ., ವಿದ್ಯಾರ್ಥಿ ಸಂಯೋಜಕರಾದ ಪ್ರಫುಲ್ ಕಮತೆ, ತನಯಾ ಕುಲಕರ್ಣಿ, ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.