ಹುಬ್ಬಳ್ಳಿ: ಕರಾವಳಿ ಪ್ರದೇಶಗಳಲ್ಲಿ ಬೀಸುತ್ತಿರುವ ಮ್ಯಾಂಡಸ್ ಚಂಡಮಾರುತದಿಂದಾಗಿ, ನಗರದಾದ್ಯಂತ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಆವರಿಸಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾಗಿದೆ.
ಜನ ಅಲ್ಲಲ್ಲಿ ಛತ್ರಿ ಹಿಡಿದು ನಡೆದುಕೊಂಡು ಹೋದರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸಾಗಿದರು. ವಿಪರೀತ ಚಳಿಯಿಂದಾಗಿ ಜನರು ಸ್ವೆಟರ್ ಸೇರಿದಂತೆ ಬೆಚ್ಚನೆಯ ಉಡುಗೆಗಳನ್ನು ಧರಿಸಿ ಓಡಾಡುತ್ತಿದ್ದ ದೃಶ್ಯ ಕಂಡುಬಂತು.
ರಾತ್ರಿಯಿಂದಲೂ ಚಳಿ ಹೆಚ್ಚಾಗಿದೆ. ಗ್ರಾಮೀಣ ಭಾಗದ ಕಲೆವೆಡೆ ಜನರು ಬೆಂಕಿ ಕಾಯಿಸುತ್ತಿದ್ದದ್ದು ಕಂಡುಬಂತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.