ADVERTISEMENT

ಮಹಾನಗರ ಪಾಲಿಕೆ ಸಾಮಾನ್ಯ ಸಭೆಯ ಭಾಷಣದಲ್ಲಿ ಮೇಯರ್ ಈರೇಶ ಅಂಚಟಗೇರಿ

ಒಂದೇ ಸೂರಿನಡಿ ಪಾಲಿಕೆಯ ಸೇವೆಗಳನ್ನು ನೀಡಲು ಪ್ರತ್ಯೇಕ ಸಾಫ್ಟ್‌ವೇರ್ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 7:16 IST
Last Updated 30 ಜೂನ್ 2022, 7:16 IST
ಮಹಾನಗರ ಪಾಲಿಕೆಯ  ಸಾಮಾನ್ಯ ಸಭೆ
ಮಹಾನಗರ ಪಾಲಿಕೆಯ  ಸಾಮಾನ್ಯ ಸಭೆ   

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ‌ ಒದಗಿಸಲು ಪ್ರತ್ಯೇಕ ಸಾಫ್ಟ್‌ವೇರ್ ಅಭಿವೃದ್ಧಿಪಡಿ, ಲಾಗುವುದು ಎಂದು‌ ಹುಬ್ಬಳ್ಳಿ- ಧಾರವಾಡ ಮೇಯರ್ ಈರೇಶ ಅಂಚಟಗೇರಿ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಮಹಾನಗರದ ವೇಗವಾದ ಅಭಿವೃದ್ಧಿಗೆ ಪೂರಕವಾಗಿ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.

ಮೇಯರ್ ಭಾಷಣಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಉಪ ಮೇಯರ್ ಉಮಾ‌ ಮುಕುಂದ, ಆಯುಕ್ತ ಡಾ. ಗೋಪಾಲಕೃಷ್ಣ ಬಿ, ಹೆಚ್ಚುವರಿ ಆಯುಕ್ತ ಶಂಕಾರನಂದ ಬನಶಂಕರಿ, ಅಧಿಕಾರಿಗಳು ಹಾಗುಹ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.