ADVERTISEMENT

ಉಕ್ರೇನ್‌ನಲ್ಲಿ ಧಾರವಾಡ ಜಿಲ್ಲೆ ವಿದ್ಯಾರ್ಥಿನಿ ಸುರಕ್ಷಿತ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 12:25 IST
Last Updated 24 ಫೆಬ್ರುವರಿ 2022, 12:25 IST
ಚೈತ್ರಾ ಸಂಶಿ
ಚೈತ್ರಾ ಸಂಶಿ   

ಹುಬ್ಬಳ್ಳಿ: ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿ ನೆಲೆಸಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿ ಸುರಕ್ಷಿತವಾಗಿದ್ದಾರೆ.

ಚೈತ್ರಾ, ಉಕ್ರೇನ್‌ನಲ್ಲಿ ಕಾರ್ಕಿವ್‌ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್‌ ಮೂರನೇ ವರ್ಷ ಓದುತ್ತಿದ್ದಾರೆ. 2019–20ನೇ ಶೈಕ್ಷಣಿಕ ಸಾಲಿನಲ್ಲಿ ಅವರು ಪ್ರವೇಶ ಪಡೆದಿದ್ದರು.

ಕಾರ್ಕಿವ್‌ ವಿ.ವಿ. ಒಂದು ಕಿ.ಮೀ. ಸಮೀಪದಲ್ಲಿ ದಾಳಿ ನಡೆದಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಪ್ರತಿ ಕ್ಷಣವನ್ನು ಕಳೆಯುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.