ADVERTISEMENT

ಖನಿಜ ನಿಧಿ: ಕೇಂದ್ರದ ಕ್ರಮಕ್ಕೆ ರಾಯರಡ್ಡಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 10:34 IST
Last Updated 30 ಆಗಸ್ಟ್ 2021, 10:34 IST
ಬಸವರಾಜ ರಾಯರಡ್ಡಿ
ಬಸವರಾಜ ರಾಯರಡ್ಡಿ   

ಧಾರವಾಡ: ಜಿಲ್ಲಾ ಖನಿಜ ನಿಧಿಯಿಂದ ಹಣ ಮಂಜೂರು ಮಾಡುವ ಅಥವಾ ಈ ನಿಧಿಯನ್ನು ಬೇರೆ ವೆಚ್ಚಕ್ಕೆ ಅನುಮೋದನೆ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಕೇಂದ್ರದ ಕ್ರಮವನ್ನು ಕಾಂಗ್ರೆಸ್ ಮುಖಂಡ ಬಡವರಾಜ ರಾಯರಡ್ಡಿ ಸ್ವಾಗತಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಣಿ ಗುತ್ತಿಗೆದಾರರಿಂದ ಪಡೆದ ಕಡ್ಡಾಯ ದೇಣಿಗೆಯನ್ನು ಗಣಿ ಬಾಧಿತ ಪ್ರದೇಶ ಹಾಗೂ ಜನರ ಅಭಿವೃದ್ಧಿ ಹಾಗೂ ಪುನರ್ವಸತಿ ಬಳಕೆಯಾಗಬೇಕು. ಆದರೆ ಹಾಗೆ ಆಗುತ್ತಿಲ್ಲ. ಈ ಹಣವನ್ನು ರಾಜ್ಯ ಸರ್ಕಾರ ಬೇರೆ ಖರ್ಚಿಗೆ ಬಳಸುತ್ತಿದೆ. ಹೀಗಿರುವಾಗ ಕೇಂದ್ರವು ರಾಜ್ಯದ ಅಧಿಕಾರವನ್ನು ಹಿಂಪಡೆದರೆ ತಪ್ಪೇನು?’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.