ADVERTISEMENT

ಹುಬ್ಬಳ್ಳಿ | ಅಂತರ ಕಾಯ್ದಿಕೊಳ್ಳಿ, ಕೊರೊನಾ ಓಡಿಸಿ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 5:46 IST
Last Updated 18 ಜೂನ್ 2020, 5:46 IST
ಹುಬ್ಬಳ್ಳಿಯಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಅವರು ಮಾಸ್ಕ್‌ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಹುಬ್ಬಳ್ಳಿಯಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಅವರು ಮಾಸ್ಕ್‌ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಹುಬ್ಬಳ್ಳಿ: ಅಂತರ ಕಾಯ್ದಕೊಳ್ಳುವ, ಸ್ಯಾನಿಟೈಸರ್‌ ಉಪಯೋಗಿಸುವ ಮೂಲಕ ದೇಶವನ್ನು ಕೊರೊನಾ ಮುಕ್ತವಾಗಿಸಲು ಎಲ್ಲರು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮನವಿ ಮಾಡಿದರು.

ಗುರುವಾರ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ‘ಮಾಸ್ಕ್‌ ಡೇ’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಜನರೂ ಅದಕ್ಕೆ ಸಹಕಾರ ನೀಡಬೇಕು ಎಂದರು.

ಲಾಕ್‌ಡೌನ್‌ ಸಡಿಲಿಕೆ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗಿದೆ. ಆರೋಗ್ಯ ಸೌಲಭ್ಯಗಳ ಹೆಚ್ಚಳಕ್ಕೂ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ADVERTISEMENT

ವಿಧಾನ ಪರಿಷತ್‌ ಚುನಾವಣೆಯ ಟಿಕೆಟ್‌ ಹಂಚಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದೆ. ಅದನ್ನು ಪಾಲಿಸುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಮ್ಮೆಲ್ಲರ ಕರ್ತವ್ಯ ಎಂದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ದೀಪಾ ಚೋಳನ್‌, ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಮುಖಂಡರಾದ ಡಿ.ಕೆ. ಚವ್ಹಾಣ, ರವಿ ನಾಯ್ಕ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.