ಹುಬ್ಬಳ್ಳಿ: ಸಚಿವರಾದ ಬಳಿಕ ಮುರುಗೇಶ ನಿರಾಣಿ ಅವರು ನಗರದಲ್ಲಿ ಮೊದಲ ಬಾರಿಗೆ ಶಾಸಕ ಜಗದೀಶ ಶೆಟ್ಟರ್ ಅವರನ್ನು ಭೇಟಿಯಾದರು.
ಶೆಟ್ಟರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬಳಿಕ ಶೆಟ್ಟರ್ ಸನ್ಮಾನಿಸಿ ಅಭಿನಂದಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ನಿರಾಣಿ, ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುವೆ. ಎಲ್ಲರಿಗೂ ಹಂಚಿಕೆಯಾದ ಬಳಿಕ ಉಳಿಯುವ ಖಾತೆ ಕೊಟ್ಟರೂ ನನಗೆ ಬೇಸರವಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.