ADVERTISEMENT

ಹುಬ್ಬಳ್ಳಿ| ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿ: ಸ್ವಾಮೀಜಿ ಒತ್ತಾಯ

ಮೂರು ಸಾವಿರ ಮಠದ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಮೇ 2023, 16:23 IST
Last Updated 27 ಮೇ 2023, 16:23 IST

ಹುಬ್ಬಳ್ಳಿ: ‘ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ಮತ್ತು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಇದು ಆ ಪಕ್ಷದ ಧರ್ಮ’ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ  ಒತ್ತಾಯಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೆಟ್ಟರ್ ಮತ್ತು ಸವದಿ ಅನುಭವಿಗಳು. ಸರಳ, ಸಾತ್ವಿಕ ವ್ಯಕ್ತಿತ್ವದವರು. ಅವರ ಅನುಭವವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಾದರೂ ಸಚಿವ ಸ್ಥಾನ ನೀಡಬೇಕು‘ ಎಂದರು.

‘ಕಾಂಗ್ರೆಸ್ ಲಿಂಗಾಯತರನ್ನು ಕಡೆಗಣಿಸಿದೆ ಎಂದು ಅನಿಸುತ್ತಿಲ್ಲ. ಶೆಟ್ಟರ್ ಮತ್ತು ಸವದಿಗೆ ಅವಕಾಶ ಮಾಡಿಕೊಟ್ಟರೆ ಆ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ವಿಶ್ವಾಸ ಇದೆ‘ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.