ಹುಬ್ಬಳ್ಳಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಒದಗಿಸಲಾದ ಎರಡುಹೊಸ ಆಂಬುಲೆನ್ಸ್ಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಕ್ಷೇತ್ರದ ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಹಳೇ ಆಸ್ಪತ್ರೆಗಳ ನವೀಕರಣ ಮತ್ತು ಹೊಸ ಆಸ್ಪತ್ರೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದರು.
ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಪಾಲಿಕೆ ಸದಸ್ಯರಾದ ದೊರೆರಾಜ್ ಮಣಿಕುಂಟ್ಲ, ನಿರಂಜನ ಹಿರೇಮಠ, ಪ್ರಕಾಶ ಕುರಹಟ್ಟಿ, ಪಾಲಿಕೆ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ
ಅನಿಲಕುಮಾರ ಪಾಟೀಲ, ಮುಖಂಡ
ರಾದ ನಾಗರಾಜ ಗೌರಿ, ಶಿವನಗೌಡ ಹೊಸಮನಿ, ಪ್ರಕಾಶ ಬುರಬುರೆ, ಶರೀಫ ಅದವಾನಿ, ಶ್ಯಾಮ ಜಾಧವ, ಬಾಬಾಜಾನ ಕಾರಡಗಿ, ವಾದಿರಾಜ ಕುಲಕರ್ಣಿ, ಯಲ್ಲಪ್ಪ ಮೆಹರವಾಡೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.