ಹುಬ್ಬಳ್ಳಿ: ಆನಂದ ಸಿಂಗ್ ಹಾಗೂ ರಮೇಶ ಜಾರಕಿಹೊಳಿ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಜಗದೀಶ ಶೆಟ್ಟರ್ ಕಾದು ನೋಡುತ್ತೇವೆ ಎಂದರು.
ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಕಾಂಗ್ರೆಸ್ ನ ಅನೇಕ ಶಾಸಕರು ಮೊದಲಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದರು. ಈಗ ಇಬ್ಬರು ಶಾಸಕರು ರಾಜೀನಾಮೆ ಕೊಡುವ ಮೂಲಕ ಅದನ್ನು ಸಾಬೀತು ಮಾಡಿ ತೋರಿಸಿದ್ದಾರೆ. ವಿರೋಧ ಪಕ್ಷವಾಗಿ ನಾವು ಸದ್ಯಕ್ಕೆ ಸುಮ್ಮನಿರುತ್ತೇವೆ. ಮುಂದಿನ ದಿನಗಳಲ್ಲಿ ಅಗುವ ಬೆಳವಣಿಗೆ ಗಮನಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದರು.
ನಾವು ಆಪರೇಷನ್ ಕಮಲ ಮಾಡುವುದಿಲ್ಲ. ಅವರೇ ಹೊಡೆದಾಡಿಕೊಂಡು ರಾಜೀನಾಮೆ ಕೊಡುತ್ತಾರೆ. ಸರ್ಕಾರ ಬೀಳಿಸಲು ನಾವು ಪ್ರಯತ್ನ ಮಾಡುವುದಿಲ್ಲ ಎಂದರು. ಈಗಿನ ಸರ್ಕಾರ ಪತನವಾದರೆ ನಾವು ಹೊಸ ಸರ್ಕಾರ ರಚಿಸುತ್ತೇವೆ ಎಂದರು.
ರಾಜೀನಾಮೆ ನೀಡಿರುವ ಶಾಸಕರು ಯಾವ ಪಕ್ಷ ಸೇರುತ್ತಾರೆ ಎಂಬುದು ಖಚಿತವಾಗಿಲ್ಲ. ಈ ಬಗ್ಗೆ ಅವರೂ ಮಾತನಾಡಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.