ADVERTISEMENT

ವೇದಿಕೆ ಮೇಲೆ ಶಾಸಕ ಶೆಟ್ಟರ್'ಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 6:00 IST
Last Updated 26 ಸೆಪ್ಟೆಂಬರ್ 2022, 6:00 IST

ಹುಬ್ಬಳ್ಳಿ; ನಗರದ ಜಿಮ್ಖಾನ ಮೈದಾನದಲ್ಲಿ ಇಂದು ನಡೆಯಲಿರುವ ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದ ವೇದಿಕೆ ಮೇಲೆ ಶಾಸಕ ಜಗದೀಶ ಶೆಟ್ಟರ್ ಸೇರಿದಂತೆ ನಾಲ್ವರು ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಮೊದಲು ರಾಷ್ಟ್ರಪತಿ ಸೇರಿದಂತೆ ಒಂಬತ್ತು ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಕಾರ್ಯಕ್ರಮ ನಡೆಯುವ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರ ಹೆಸರನ್ನೇ ಕೈ ಬಿಡಲಾಗಿದೆ ಎಂದು, ಅವರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದರು.

ADVERTISEMENT

ಭಾನುವಾರ ತಡರಾತ್ರಿ ನಾಲ್ವರು ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ, ಅಮೃತ ದೇಸಾಯಿ ಮತ್ತು ಪ್ರಸಾದ ಅಬ್ಬಯ್ಯ ಅವರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.