ADVERTISEMENT

ಕಡಲೆಕಾಳು ಖರೀದಿ ಕೇಂದ್ರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 3:49 IST
Last Updated 13 ಮಾರ್ಚ್ 2022, 3:49 IST
ಕಡಲೆಕಾಳು ಖರೀದಿ ಕೇಂದ್ರವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಉದ್ಘಾಟಿಸಿದರು
ಕಡಲೆಕಾಳು ಖರೀದಿ ಕೇಂದ್ರವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಉದ್ಘಾಟಿಸಿದರು   

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣದಲ್ಲಿ 2021-22 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳು ಖರೀದಿ ಕೇಂದ್ರವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಉದ್ಘಾಟಿಸಿದರು.

ರೈತ ಬೆಳೆಗೆ ಸೂಕ್ತ ಬೆಂಬಲ ಬೆಲೆ ದೊರಯಲಿ ಎಂಬ ಉದ್ದೇಶದಿಂದ ಸರ್ಕಾರ ಕಡಲೆ ಕೇಂದ್ರ ತೆರೆದಿದೆ. ಪ್ರತಿ ಕ್ವಿಂಟಲ್‌ ಕಡಲೆ ಕಾಳಿಗೆ ₹ 5,230 ಬೆಲೆ ಸರ್ಕಾರ ನಿಗದಿ ಮಾಡಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಎಪಿಎಂಸಿ ಅಧ್ಯಕ್ಷ ಚನ್ನಬಸಗೌಡ ಪಾಟೀಲ, ಉಮೇಶ ಹೆಬಸೂರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT