ADVERTISEMENT

ಮುನಿರತ್ನ ಪ್ರಕರಣ | ಕೆಟ್ಟ ಪದ ಬಳಕೆ ಸಂಸ್ಕಾರವಲ್ಲ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 15:41 IST
Last Updated 17 ಸೆಪ್ಟೆಂಬರ್ 2024, 15:41 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಧಾರವಾಡ: ‘ಕೆಟ್ಟದಾಗಿ ಮಾತನಾಡುವುದು ಸಂಸ್ಕಾರ ಅಲ್ಲ. ಲಕ್ಷಗಟ್ಟಲೇ ಜನರನ್ನು ಪ್ರತಿನಿಧಿಸುವವರೇ (ಶಾಸಕರು) ಕೆಟ್ಟದಾಗಿ ಮಾತನಾಡಿದರೆ ಸಮಾಜಕ್ಕೆ ಯಾವ ಸಂದೇಶ ರವಾನೆ ಆಗುತ್ತದೆ?’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.

ಶಾಸಕ ಮುನಿರತ್ನ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅದು ತಮ್ಮ ಧ್ವನಿಯಲ್ಲ ಎಂದು ಅವರು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ’ ಎಂದರು.

‘‍ಹಣ ನೀಡಿ ಮತ ಹಾಕಿಸಿಕೊಳ್ಳುವವರು ಮತ್ತು ಹಣ ಪಡೆದು ಮತ ಹಾಕುವವರು ಇರುವವರೆಗೆ ಪ್ರಜಾಪ್ರಭುತ್ವದ ಆಶಯ ಸಾಕಾರವಾಗಲ್ಲ. ಈಗಿನ ರಾಜಕಾರಣದಲ್ಲಿ ನೈತಿಕತೆ ಇಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ದೇಶದಲ್ಲಿ ಅನೇಕ ಜಾತಿಯವರು ಇದ್ದಾರೆ. ಎಲ್ಲರೂ ಹೊಂದಿಕೊಂಡು ಬಾಳಬೇಕು. ಗಲಾಟೆ ಮಾಡುವವರು, ಬೆಂಕಿ ಹಚ್ಚುವವರು ಕೆಲವರು ಇರುತ್ತಾರೆ. ಸಮಾಜ ಘಾತುಕರನ್ನು ಮಟ್ಟ ಹಾಕಬೇಕು. ಉತ್ತರ ಪ್ರದೇಶದಲ್ಲಿ ಮಾಡಿದಂತೆ ಬಿಗಿ ಮಾಡಬೇಕು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.