ADVERTISEMENT

ಕೊಲೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 14:54 IST
Last Updated 31 ಡಿಸೆಂಬರ್ 2020, 14:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹುಬ್ಬಳ್ಳಿ: ನಗರದ ದೇವಾಂಗಪೇಟೆ ಮುಖ್ಯರಸ್ತೆಯ ರಾಜಾಜಿನಗರ ಕ್ರಾಸ್ ಬಳಿ ನಡೆದಿದ್ದ ಬುಧವಾರ ರಾತ್ರಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಶೋಕನಗರ ಠಾಣೆ ಪೊಲೀಸರು ಗುರುವಾರ ಆಸಿಫ್ ತಹಶೀಲ್ದಾರ್ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ದೇವಾಂಗಪೇಟೆಯ ಮೆಹಬೂಬಸಾಬ್ ಅಲ್ಲಾಭಕ್ಷ ಶಿವಳ್ಳಿ (40) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಶವವನ್ನು ಚರಂಡಿಗೆ ಎಸೆದು ಹೋಗಿದ್ದ. ಕೊಲೆಯಾದ ಮೆಹಬೂಬಸಾಬ್ ಮತ್ತು ಆಸಿಫ್ ಇಬ್ಬರೂ ಸಂಬಂಧಿಗಳಾಗಿದ್ದು, ಕೌಟುಂಬಿಕ ಕಲಹವೇ ಕೊಲೆಗೆ ಕಾರಣವಾಗಿದೆ ಎಂದು ಅಶೋಕನಗರ ಠಾಣೆ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT