ADVERTISEMENT

ಕಲಘಟಗಿ: ವೃದ್ಧೆಯ ಕತ್ತು ಕೊಯ್ದು ಕೊಲೆ

​ಪ್ರಜಾವಾಣಿ ವಾರ್ತೆ
Published 29 ಮೇ 2023, 6:08 IST
Last Updated 29 ಮೇ 2023, 6:08 IST
ತಿಪ್ಪವ್ವ ತಂಬೂರ
ತಿಪ್ಪವ್ವ ತಂಬೂರ   

ಕಲಘಟಗಿ: ಚಿನ್ನಾಭರಣದ ಆಸೆಗೆ ವೃದ್ಧೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಹೊಲದಲ್ಲಿ ಶನಿವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ತಿಪ್ಪವ್ವ ತಂಬೂರ(82) ಕೊಲೆಯಾದವರು. ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಅವರ ಕಬ್ಬಿನ ಹೊಲದಲ್ಲಿ ತಿಪ್ಪವ್ವ ಅವರನ್ನು ಕೊಲೆ ಮಾಡಿ ಕೊರಳಲಿದ್ದ ಚಿನ್ನಭಾರಣ ದೋಚಲಾಗಿದೆ.

ತಿಪ್ಪವ್ವ ಅವರ ಮೃತ ದೇಹ ನೋಡಿದ ಗ್ರಾಮಸ್ಥರು  ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಕಲಘಟಗಿ ಠಾಣೆ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.