ಧಾರವಾಡ: ‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದೆ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಡಿಯಲ್ಲಿರುವ ಯುವತಿ ಸದ್ಯ ರಾಜ್ಯ ಮಹಿಳಾ ಆಯೋಗದಲ್ಲಿ ದೂರು ಸಲ್ಲಿಸಿದ್ದಾರೆ. ಅಲ್ಲಿ ವಿಚಾರಣೆ ನಡೆಯಲಿದೆ. ಅವರಿಗೆ ಸಹಕಾರಿಯಾಗಿಯೇ ನಾವು ಕೆಲಸ ಮಾಡುತ್ತೇವೆ. ಮಹಿಳೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಆ ಮಹಿಳೆ ಜತೆ ನಾವಿದ್ದೇವೆ’ ಎಂದು ಭರವಸೆ ನೀಡಿದೆ.
‘ಆದರೆ ಯಾವಾಗಲೂ ಕಾನೂನಿನ ಸದುಪಯೋಗವಾಗಬೇಕು. ದುರುಪಯೋಗವಾದಾಗ ಆಗುವ ಪರಿಣಾಮವೂ ಆ ಮಹಿಳೆಗೆ ಗೊತ್ತಿರಬೇಕು. ಅಪರಾಧಿ ಎಂದು ಸಾಬೀತಾದರೆ ಖಂಡಿತಾ ಶಿಕ್ಷೆ ಆಗಿಯೇ ಆಗುತ್ತದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.