ADVERTISEMENT

ನೇಹಾ ಹತ್ಯೆ | ಪೊಲೀಸ್ ಅಧಿಕಾರಿಗಳ ಮೂಲಕ ಫೋಟೊ ಹಂಚಿಕೆ: ಶಾಸಕ ಟೆಂಗಿನಕಾಯಿ ಆರೋಪ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 8:13 IST
Last Updated 21 ಏಪ್ರಿಲ್ 2024, 8:13 IST
<div class="paragraphs"><p>ಶಾಸಕ ಮಹೇಶ ಟೆಂಗಿನಕಾಯಿ</p></div>

ಶಾಸಕ ಮಹೇಶ ಟೆಂಗಿನಕಾಯಿ

   

ಹುಬ್ಬಳ್ಳಿ: 'ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಮೊಬೈಲ್'ನಲ್ಲಿದ್ದ ಫೋಟೊಗಳನ್ನು ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿಸುತ್ತಿದೆ' ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನೇಹಾಳನ್ನು ಕೊಲೆ ಮಾಡಿದ ನಂತರ ಆರೋಪಿಯ ಮೊಬೈಲ್‌ ಪೊಲೀಸರ ಬಳಿಯಿತ್ತು. ಈಗ ಆ ಮೊಬೈಲ್'ನಲ್ಲಿದ್ದ ಫೋಟೊಗಳನ್ನು ಹಂಚಿಕೆ ಮಾಡುವ ಮೂಲಕ, ಅವಳ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆದಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

'ಪ್ರಕರಣದ ಕುರಿತು ರಾಜ್ಯ ಸರ್ಕಾರ ಈವರೆಗೂ ಯಾವುದೇ ಸ್ಪಷ್ಟತೆ ನೀಡಿಲ್ಲ. ಒಂದು ಕಡೆ ಗೃಹ ಸಚಿವರು ಆಕಸ್ಮಿಕ ಎನ್ನುತ್ತಾರೆ, ಇನ್ನೊಂದೆಡೆ ಮುಖ್ಯಮಂತ್ರಿ ವೈಯಕ್ತಿಕ ಎಂದು ಹೇಳಿಕೆ ನೀಡುತ್ತಾರೆ. ಅವಳ ಕುಟುಂಬಕ್ಕೆ ಸಾಂತ್ವನ ಹೇಳುವುದನ್ನು ಬಿಟ್ಟು, ಇನ್ನಷ್ಟು ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.

'ಸೌಜನ್ಯಕ್ಕಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ಮನೆಗೆ ಬಂದು ಕುಟುಂಬದವರಿಗೆ ಸಾಂತ್ವನ ಹೇಳಬಹುದಿತ್ತು. ಅದೇ ಮುಸ್ಲಿಂ ಸಮುದಾಯದವರಿಗೆ ಹೀಗೆ ಆಗಿದ್ದರೆ ಮೊದಲು ಬರುತ್ತಿದ್ದರು' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.