ನವಲಗುಂದ: ಸಮೀಪದ ಬಸಾಪುರ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಿಂಗಪ್ಪ ಯಲ್ಲಪ್ಪ ಬಾರಕೇರ ಹಾಗೂ ಉಪಾಧ್ಯಕ್ಷರಾಗಿ ವಿರೂಪಾಕ್ಷ ಕಲ್ಯಾಣಪ್ಪ ಶರಣಪ್ಪನವರ ಅವಿರೋಧವಾಗಿ ಆಯ್ಕೆಯಾದರು.
ಶುಕ್ರವಾರ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಿತು. ಸಹಕಾರ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವಿ. ಕುರವತ್ತಿಮತ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಅವಿರೋಧ ಆಯ್ಕೆ ಘೋಷಣೆಯಾಗುತ್ತಿದಂತೆ ನಿಂಗಪ್ಪ, ವಿರೂಪಾಕ್ಷ ಶರಣಪ್ಪನವರ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.