ADVERTISEMENT

ಸಾರಿಗೆ ನೌಕರರ ಸಹಕಾರಿ ಪತ್ತಿನ ನಿರ್ದೇಶಕ ಮಂಡಳಿ: ನ. 19ರಂದು ಚುನಾವಣೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 4:30 IST
Last Updated 1 ನವೆಂಬರ್ 2020, 4:30 IST

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನ. 19ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ತನಕ ನಗರದ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಮತದಾನ ಜರುಗಲಿದೆ.

ಐದು ವರ್ಷಗಳ ಅವಧಿ ಇದಾಗಿದ್ದು, ಬೆಂಗಳೂರಿನ ಸಹಕಾರ ಸಂಘಗಳ ಜಂಟಿ ನಿಬಂಧಕರು ಹುಬ್ಬಳ್ಳಿ ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಿದ್ದಾರೆ. ಒಟ್ಟು 19 ಆಡಳಿತ ಮಂಡಳಿಯ ಸದಸ್ಯ ಸ್ಥಾನಗಳಿಗೆ ಚುನಾವಣೆ ಜರುಗಲಿದೆ.‌ ಸಾಮಾನ್ಯ 13, ಮಹಿಳೆ 2, ಹಿಂದುಳಿದ ’ಅ’ ಪ್ರವರ್ಗ, ಹಿಂದುಳಿದ ’ಬ' ಪ್ರವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ತಲಾ ಒಂದು ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ನ. 3ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, 10 ಕೊನೆಯ ದಿನವಾಗಿದೆ. 11ರಂದು ನಾಮಪತ್ರಗಳ ಪರಿಶೀಲನೆ, 12ರಂದು ವಾಪಸ್‌ ಪಡೆಯುವಿಕೆ ಇರಲಿದೆ. 14ರಂದು ಮಾದರಿ ಮತಪತ್ರಗಳನ್ನು ಪ್ರಕಟಿಸಲಾಗುವುದು. ಮತದಾನದ ದಿನವೇ ಫಲಿತಾಂಶ ಘೋಷಿಸಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.