ADVERTISEMENT

ಹಿರಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಸಿ.ಬಿ.ತಿಗಡಿ ನಿಧನ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 19:06 IST
Last Updated 28 ಆಗಸ್ಟ್ 2019, 19:06 IST
ಪ್ರೊ. ಸಿ.ಬಿ.ಸಿಗಡಿ
ಪ್ರೊ. ಸಿ.ಬಿ.ಸಿಗಡಿ   

ಧಾರವಾಡ: ಹಿರಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಸಿ.ಬಿ.ತಿಗಡಿ (92) ಬುಧವಾರ ಇಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಬೆಳಗಾವಿ ಜಿಲ್ಲೆಯ ಕಡೊಲಿ ಗ್ರಾಮದ ಅವರು, ಲಂಡನ್‌ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಉನ್ನತ ಶಿಕ್ಷಣ ಪಡೆದು, ಕರ್ನಾಟಕ ವಿಶ್ವವಿದ್ಯಾಲ ಯದಲ್ಲಿ ಪ್ರಾಧ್ಯಾಪಕ ವೃತ್ತಿ ಆರಂಭಿಸಿದ್ದರು. ಅಮೆರಿಕಾದ ಫ್ಲಾರಿಡಾ ವಿ.ವಿ.ಗೆ ಸಂದರ್ಶಕ
ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದಾರೆ.

ADVERTISEMENT

1970ರಲ್ಲಿ ಕರ್ನಾಟಕ ವಿ.ವಿ. ಮ್ಯಾನೇಜಮೆಂಟ್ ಸಂಸ್ಥೆ ಯನ್ನು ಆರಂಭಿ ಸಲು ನಿರ್ಧರಿಸಿ ದಾಗ, ತಿಗಡಿ ಅವರನ್ನೇ ಅದರ ಉಸ್ತು ವಾರಿಯಾಗಿ ನೇಮಕ ಮಾಡಲಾಗಿತ್ತು. ಅವರ ಪ್ರಯತ್ನದಿಂದಾಗಿ ತಮ್ಮಪ್ಪ ಕೌಸಾಳೆ ಇನ್‌ಸ್ಟಿಟ್ಯೂಟ್ ಆಫ್‌ ಮ್ಯಾನೇಜಮೆಂಟ್‌ ಕಾರ್ಯಾರಂಭ ಮಾಡಿತು.

ಬೆಂಗಳೂರಿನಲ್ಲಿ ಇಂಡಿಯಾ ಪಾಪುಲೇಷನ್ ಸೆಂಟರ್‌ ಅನ್ನು ತಿಗಡಿ ಆರಂಭಿಸಿದ್ದರು. ತಿಗಡಿ ಅವರ ಇಚ್ಛೆಯಂತೆ ಅವರ ಮೃತದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಎಸ್‌ಡಿಎಂ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.