ಹುಬ್ಬಳ್ಳಿ: ಶತಾಯುಷಿ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ವಿಜಯನಗರದ ಸಿಟಿ ಪ್ರೌಢಶಾಲೆಯಲ್ಲಿ ಮಂಗಳವಾರ ಮತದಾನ ಮಾಡಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಮತದಾನ ಮಾಡಬೇಕು. ಯಾರಿಂದಲೋ ಹೇಳಿಸಿಕೊಂಡು ಅಲ್ಲ’ಎಂದರು.
ಪಾಪು ಅವರ ಪುತ್ರ ಅಶೋಕ ಪಾಟೀಲ ಮಾತನಾಡಿ, ‘ತಂದೆಯವರು 1951ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.