ಹುಬ್ಬಳ್ಳಿ: ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಖಚಿತ ಪಡಿಸಿದ್ದಾರೆ.
‘ಉಸಿರಾಟದ ತೊಂದರೆಯಿಂದ ಪಾಟೀಲ ಪುಟ್ಟಪ್ಪ ಅವರು 10 ದಿನಗಳ ಹಿಂದೆ ಕಿಮ್ಸ್ ಗೆ ದಾಖಲಾಗಿದ್ದರು. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ’ ಎಂದರು.
ಮೆದುಳಿನ ನರದಲ್ಲಿ ರಕ್ತ ಸರಾಗವಾಗಿ ಹರಿಯದೆ ಹೆಪ್ಪುಗಟ್ಟಿದೆ. ನಾಳೆ ಶಸ್ತ್ರ ಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.