ADVERTISEMENT

ಕಾಂಗ್ರೆಸ್‌ಗೆ ಪಿ.ಎಚ್‌.ನೀರಲಕೇರಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 13:52 IST
Last Updated 16 ಮಾರ್ಚ್ 2024, 13:52 IST
   

ಧಾರವಾಡ: ಕೆಪಿಸಿಸಿ ವಕ್ತಾರ ಪಿ.ಎಚ್‌.ನೀರಲಕೇರಿ ಅವರು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ಧಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ಧಾರೆ.

‘ಪಕ್ಸದ ತತ್ವ ಸಿದ್ದಾಂತಕ್ಕೆ ನಿಷ್ಠನಾಗಿ ಕಾರ್ಯನಿರ್ವಹಿಸಿದ್ದೇನೆ. ನಾಯಕರು ಕಡೆಗಣಿಸಿದ್ದರಿಂದ ನೋವಾಗಿದೆ, ಹೀಗಾಗಿ ರಾಜೀನಾಮೆಗೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷದೊಂದಿಗಿನ ಸುಮಾರು ಮೂರು ದಶಕಗಳ ಸಂಬಂಧ ಅಂತ್ಯಗೊಂಡಿದೆ. ಮುಂದಿನ ರಾಜಕೀಯ ಜೀವನದ ನಿರ್ಧಾರವನ್ನು ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ’ ಎಂದು ಪಿ.ಎಚ್‌.ನೀರಲಕೇರಿ ‘ಪ್ರಜಾವಾಣಿ’ಗೆ ತಿಳಿಸಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.