ADVERTISEMENT

ವಿವೇಕಾನಂದರ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಮೋದಿ ಚಾಲನೆ: ಜೋಶಿ

ರಾಷ್ಟ್ರವ್ಯಾಪಿ 7,500 ಪ್ರತಿನಿಧಿಗಳು ಭಾಗಿ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2022, 6:32 IST
Last Updated 26 ಡಿಸೆಂಬರ್ 2022, 6:32 IST
   

ಧಾರವಾಡ: ‘ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವಜನೋತ್ಸವ ನಗರದಲ್ಲಿ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ದೇಶದ ವಿವಿಧೆಡೆಯಿಂದ ಸುಮಾರು 7,500 ಪ್ರತಿನಿಧಿಗಳು, ಆಯಾರಾಜ್ಯಗಳ ಸಾಂಸ್ಕೃತಿಕ ರಾಯಭಾರಿಗಳು ಉತ್ಸವದಲ್ಲಿ ಭಾಗವಹಿಸಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಯುವಜನೋತ್ಸವಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತಲಾ ₹10 ಕೋಟಿ ಅನುದಾನ ನೀಡಿವೆ. ಕರ್ನಾಟಕ ಕಲಾ ಕಾಲೇಜು ಮೈದಾನದಲ್ಲಿ ಸಂಜೆ 6ರಿಂದ 9ರವರೆಗೆ ವಿವಿಧ ರೀತಿಯ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಜೋಶಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.