ADVERTISEMENT

‍ಪಾಲಿಕೆ ಚುನಾವಣೆಗೆ ಸಜ್ಜಾಗಿ: ಅರವಿಂದ ಬೆಲ್ಲದ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 13:08 IST
Last Updated 8 ಏಪ್ರಿಲ್ 2021, 13:08 IST
ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಬಿಜೆಪಿ ಸಭೆಯಲ್ಲಿ ಅರವಿಂದ ಬೆಲ್ಲದ ಮಾತನಾಡಿದರು
ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಬಿಜೆಪಿ ಸಭೆಯಲ್ಲಿ ಅರವಿಂದ ಬೆಲ್ಲದ ಮಾತನಾಡಿದರು   

ಹುಬ್ಬಳ್ಳಿ: ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಪಕ್ಷದ ಎಲ್ಲರೂ ಸಜ್ಜಾಗಬೇಕಿದೆಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಬೆಲ್ಲದ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಮಹಾನಗರ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವ ಜತೆಗೆ ನಾಯಕತ್ವವನ್ನೂ ಬೆಳೆಸಿಕೊಳ್ಳಬೇಕು. ಎಲ್ಲ ಮಂಡಲಗಳಲ್ಲಿ ಸಂಘಟನಾತ್ಮಕ ಸಭೆ ನಡೆಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಮಾತನಾಡಿ, ಪಕ್ಷದ ಚಟುವಟಿಕೆಗಳು ನಿರಂತರವಾಗಿರಬೇಕು. ಪಕ್ಷದ ಪದಾಧಿಕಾರಿಗಳಾಗಲು ಎಷ್ಟೋ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಿಮಗೆ ಅವಕಾಶ ಸಿಕ್ಕಿದೆ. ಅದನ್ನು ಬಳಸಿಕೊಳ್ಳಿರಿ.

ADVERTISEMENT

ಮಾಜಿ ಮೇಯರ್ ಸುಧೀರ ಸರಾಫ, ಜಿಲ್ಲಾ ಉಪಾಧ್ಯಕ್ಷರಾಗಿದ್ದ ಶಂಕರಪ್ಪ ಛಬ್ಬಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿಭಾಗ ಸಹ-ಸಂಘಟನಾ ಕಾರ್ಯದರ್ಶಿ ರಾಜಕುಮಾರ ಬಸವಾ, ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ಜಿಲ್ಲಾ ವಕ್ತಾರ ರವಿ ನಾಯ್ಕ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಈರಣ್ಣ ಹಪ್ಪಳಿ, ಕೃಷ್ಣಾ ಗಂಡಗಾಳೆಕರ, ಅನಸೂಯಾ ಹಿರೇಮಠ, ಸುಜಾತಾ ಕಳ್ಳಿಮನಿ, ಪೂರ್ಣಿಮಾ ಶಿಂಧೆ, ಪ್ರಮಿಳಮ್ಮಾ ಕೋಟಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.