ADVERTISEMENT

ಐಐಐಟಿ ಧಾರವಾಡ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿ: ಬರಮಾಡಿಕೊಂಡ ಸುಧಾ ಮೂರ್ತಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 9:17 IST
Last Updated 26 ಸೆಪ್ಟೆಂಬರ್ 2022, 9:17 IST
   

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸ್ಥೆಯ ಅಧ್ಯಕ್ಷೆ ಸುಧಾ ಮೂರ್ತಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು.

ರಾಷ್ಟ್ರಪತಿ ಅವರಿಗೆ ಐಐಐಟಿ ಕ್ಯಾಂಪಸ್‌ನಲ್ಲಿ ಗ್ರೀನ್ ರೂಮ್ ಸ್ಥಾಪಿಸಲಾಗಿದ್ದು, ಅವರಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿದೆ. ಉತ್ತರ ಕರ್ನಾಟಕ ಶೈಲಿಯ ಸಾಂಪ್ರದಾಯಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ADVERTISEMENT

ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಸಭಾಂಗಣದಲ್ಲಿ 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು, ಅಧಿಕಾರಿಗಳು, ಆಹ್ವಾನಿತ ಗಣ್ಯರು, ಭಾರತೀಯ ತಾಂತ್ರಜ್ಞಾನ ಸಂಸ್ಥೆ (ಐಐಟಿ) ಅಧಿಕಾರಿಗಳು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.