ಹುಬ್ಬಳ್ಳಿ: ಕಲಾ ಕ್ಷೇತ್ರದಲ್ಲಿ ಇಷ್ಟು ವರ್ಷಗಳ ಕಾಲ ಮಾಡಿದ ಕೆಲಸಕ್ಕೆ ಸಿಕ್ಕ ದೊಡ್ಡ ಗೌರವ ಇದಾಗಿದೆ. ಈ ಬಾರಿ ಪ್ರಶಸ್ತಿ ಬರಬಹುದು ಎನ್ನುವ ನಿರೀಕ್ಷೆಯಿತ್ತು ಎಂದು ಚಿತ್ರಕಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದ ಎಂ.ಜಿ. ವಾಚೇದಮಠ ಖುಷಿ ಹಂಚಿಕೊಂಡರು.
ಮೂಲತ: ಶಿರಹಟ್ಟಿ ತಾಲ್ಲೂಕಿನ ತೋಗನೂರ ಗ್ರಾಮದ ವಾಚೇದಮಠ 1958ರಲ್ಲಿ ಚಿತ್ರಕಲಾ ಶಿಕ್ಷಕರ ಪರೀಕ್ಷೆಯಲ್ಲಿ ಮುಂಬೈ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದರು. ಸವದತ್ತಿಯಲ್ಲಿ ಬಸವರೂಪ ಪ್ರದರ್ಶನ, ಗಾಂಧಿ ದರ್ಶನ, ಹುಬ್ಬಳ್ಳಿಯಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಏರ್ಪಡಿಸಿದ್ದರು. 1956ರಿಂದ ಶಿರಹಟ್ಟಿಯ ಎಂ.ಎಂ. ಡಬಾಲಿ ಪ್ರೌಢಶಾಲೆಯಲ್ಲಿ ಕಲಾಶಿಕ್ಷಕ ವೃತ್ತಿ ಆರಂಭಿಸಿದರು. ಸಾವಿರಾರು ರೇಖಾಚಿತ್ರಗಳನ್ನು, ಸಂಯೋಜನೆಗಳನ್ನು ಮತ್ತು ಭಾವಚಿತ್ರಗಳನ್ನು ರಚಿಸಿದ್ದಾರೆ. ಇವರಿಗೆ 1998–99ನೇ ಸಾಲಿನ ಕರ್ನಾಟಕ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.
ಸದ್ಯಕ್ಕೆ ಹುಬ್ಬಳ್ಳಿಯ ಮಂಜುನಾಥ ನಗರದದಲ್ಲಿ ವಾಸವಾಗಿರುವ ಅವರು ‘ನನ್ನ ಕಲಾ ಸಾಧನೆಯನ್ನು ಗುರುತಿಸಿ ಸರ್ಕಾರ ಗೌರವ ನೀಡಿದ್ದಕ್ಕೆ ಅತೀವ ಖುಷಿಯಾಗಿದೆ. ನನ್ನ ಶ್ರಮಕ್ಕೆ ಈಗ ಫಲ ಲಭಿಸಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.