ಹುಬ್ಬಳ್ಳಿ: ‘ಸ್ಥಳೀಯ ಕುಶಲಕರ್ಮಿಗಳು, ಅವರ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆಯನ್ನು ರೈಲ್ವೆ ನಿಲ್ದಾಣದಲ್ಲಿ ಪರಿಚಯಿಸಲಾಗಿದೆ’ ಎಂದು ಹುಬ್ಬಳ್ಳಿ ವಿಭಾಗೀಯರೈಲ್ವೆ ವ್ಯವಸ್ಥಾಪಕ ಅರವಿಂದ ಮಾಳಖೇಡ ಹೇಳಿದರು.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಅಡಿ ಶನಿವಾರ ಗದಗ-ಬೆಟಗೇರಿ ಹಾಗೂ ಇಳಕಲ್ ಸೀರೆಗಳ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ರೈಲ್ವೆ ನಿಲ್ದಾಣದಲ್ಲಿ ಮಳಿಗೆ ಪ್ರಾರಂಭಿಸಿರುವುದರಿಂದ ವಿವಿಧೆಡೆ ಪ್ರಯಾಣಿಸುವವರಿಗೆ ಮತ್ತೊಂದು ಭಾಗದ ಸಂಸ್ಕೃತಿ, ಕಲೆಯ ಪರಿಚಯವಾಗುತ್ತದೆ’ ಎಂದರು.
ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್ ಅವರು ಮಾತನಾಡಿ, ‘ಈ ಯೋಜನೆಯನ್ನು ಹುಬ್ಬಳ್ಳಿ ವಿಭಾಗದ 15 ರೈಲು ನಿಲ್ದಾಣಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದ್ದು, ಆಸಕ್ತರು ಹುಬ್ಬಳ್ಳಿಯ ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರ ಕಾರ್ಯಾಲಯದ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದರು.
ಹುಬ್ಬಳ್ಳಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ್ ವರ್ಮಾ, ಗದಗ ವೀವರ್ಸ್ ಪ್ರೊಡ್ಯೂಸರ್ಸ್ ಕಂಪನಿಯ ನಿರ್ದೇಶಕ ಮಹೇಶ್ ಇಂಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.