
ಪ್ರಜಾವಾಣಿ ವಾರ್ತೆ
ಧಾರವಾಡ: ಇಲ್ಲಿನ ನುಗ್ಗಿಕೇರಿ ಹನುಮಂತ ದೇವರ ಗುಡಿಯ ವ್ಯವಸ್ಥಾಪಕ ಸಮಿತಿ ನೀಡುವ 2025-26 ನೇ ಸಾಲಿನ ‘ಬಲಭೀಮ ಪ್ರಶಸ್ತಿ’ಗೆ ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಪ್ರೊ. ಸತ್ಯಧ್ಯಾನಾಚಾರ್ಯ ಕಟ್ಟಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಫೆಬ್ರುವರಿ 28 ರಂದು ಬೆಳಿಗ್ಗೆ 9 ಗಂಟೆಗೆ ನುಗ್ಗಿಕೇರಿಯ ಹನುಮಂತ ದೇವರ ಗುಡಿಯ ಸಾಂಸ್ಕೃತಿಕ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.