ಧಾರವಾಡ: ಯುವಜನರು ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕ್ಲಾಸಿಕ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಲಕ್ಷ್ಮಣ ಎಸ್. ಉಪ್ಪಾರ ಹೇಳಿದರು.
ನಗರದ ಕ್ಲಾಸಿಕ್ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ಎಂ.ವೈ.ಸಾವಂತ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಮಹಾಪುರುಷರ ಆತ್ಮಚರಿತ್ರೆಗಳನ್ನು ಅಧ್ಯಯನ ಮಾಡಿ ಸಾಧನೆ ಮಾಡಬೇಕು ಎಂದರು.
ಪ್ರಾಚಾರ್ಯ ಎಸ್.ಜಿ. ಹಿರೇಮಠ, ಪ್ರೊ. ಸಚ್ಚಿದಾನಂದ ಉಪ್ಪಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.