ADVERTISEMENT

‘ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣ’

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 14:38 IST
Last Updated 22 ನವೆಂಬರ್ 2023, 14:38 IST
ಧಾರವಾಡದ ವಿಶ್ವಧರ್ಮ ಪ್ರವಚನ ಸಮಾರಂಭದ ಉದ್ಘಾಟನೆಯಲ್ಲಿ ನಿಜಗುಣಾನಂದ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ ವಚನ ಓದಿದರು
ಧಾರವಾಡದ ವಿಶ್ವಧರ್ಮ ಪ್ರವಚನ ಸಮಾರಂಭದ ಉದ್ಘಾಟನೆಯಲ್ಲಿ ನಿಜಗುಣಾನಂದ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ ವಚನ ಓದಿದರು    

ಧಾರವಾಡ: ‘ಬಸವಣ್ಣನವರು ವಿಶ್ವಕ್ಕೆ ವಚನ ಸಾಹಿತ್ಯವನ್ನು ಕೊಡುಗೆ ನೀಡಿದರು. ಸಮಾಜದ ಏಳಿಗೆಗೆ ಶ್ರಮಿಸಿದರು’ ಎಂದು ಸಾಹಿತಿ ಎಸ್.ಆರ್. ಗುಂಜಾಳ್ ಹೇಳಿದರು.

ನಗರದ ಲಿಂಗಾಯತ ಟೌನ್‌ಹಾಲ್ ಆವರಣದಲ್ಲಿ ಪ್ರವಚನ ಸಮಿತಿ ಏರ್ಪಡಿಸಿರುವ ನಿಜಗುಣಾನಂದ ಸ್ವಾಮಿಜಿ ಅವರ ವಿಶ್ವಧರ್ಮ ಪ್ರವಚನ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಸಕಲ ಜೀವರಾಶಿಗೆ ಲೇಸು ಬಯಸಿದ ವಿಶ್ವ ಗುರು ಬಸವಣ್ಣ, ಮೂಢನಂಬಿಕೆ, ಕಂದಾಚಾರಗಳಿಂದ ತುಂಬಿದ್ದ ಸಮಾಜದ ಸುಧಾರಣೆಗೆ ಹೋರಾಡಿದರು. 12ನೇ ಶತಮಾನದಲ್ಲಿ ಸ್ತ್ರೀ ಸಮಾನತೆಗಾಗಿ ಶ್ರಮಿಸಿದರು. ಅವರ ವಚನಗಳು ದಾರಿದೀಪವಾಗಿವೆ’ ಎಂದರು.

ADVERTISEMENT

ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಯುವಕರು ಹಾಗೂ ಮಕ್ಕಳಿಗೆ ಬಸವ ಸಂಸ್ಕೃತಿ, ಸಂಸ್ಕಾರ ತಿಳಿಸುವ ಅಗತ್ಯವಿದೆ. ಉತ್ತಮ ಪ್ರಜೆಗಳಾಗಿ, ಸಮಾಜದ ಒಳಿತಿಗಾಗಿ ದುಡಿಯುವ ಪೀಳಿಗೆ ಸಿದ್ಧವಾಗಬೇಕು. ಅವರನ್ನು ಪ್ರವಚನ ಕಾರ್ಯಕ್ರಮಕ್ಕೆ ಕರೆತರಬೇಕು’ ಎಂದು ಹೇಳಿದರು.

ರಾಜಶೇಖರ ಬೆಳ್ಳಕ್ಕಿ, ವೀರಣ್ಣ ರಾಜೂರ, ಶಿವಶಂಕರ್ ಹಂಪನ್ನವರ, ರಾಜು ಮರಳಪ್ಪನವರ, ನಾಗರಾಜ ಪಟ್ಟಣಶೆಟ್ಟಿ, ಹನಮಂತ ಮಾರಡಗಿ, ಗುರುರಾಜ ಹುಣಸಿಮರದ, ಶಿವಶರಣ್, ಶಂಭುಲಿಂಗ ಹೆಗಡಾಳ್, ಗಿರೀಶ್ ದೇಸೂರ, ಶಿವರುದ್ರಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.