ಧಾರವಾಡ: ‘ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಮತದಾನ ನಮ್ಮೆಲ್ಲರ ಹಕ್ಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ ಹೇಳಿದರು.
ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ರೋಟರಿ ಕ್ಲಬ್ ವತಿಯಿಂದ ತಾಲ್ಲೂಕಿನ ಕೊಟಬಾಗಿ ಗ್ರಾಮ ಪಂಚಾಯಿತಿಯಲ್ಲಿ ಈಚೆಗೆ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಹಿಳೆಯರು ಹೊಲಿಗೆ, ಕಂಪ್ಯೂಟರ್ ತರಬೇತಿ ಪಡೆದುಕೊಂಡು ಸ್ವಉದ್ಯೋಗ ಮಾಡಿ ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ತಪ್ಪದೇ ಮತದಾನ ಮಾಡಬೇಕು’ ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಎನ್ಆರ್ಎಲ್ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ವಿನೋದ್ ಕಂಠಿ, ಬಸವರಾಜ ಶೆಟ್ಟಪ್ಪನವರ, ರವಿಕುಮಾರ ಮಡಿವಾಳರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.