ADVERTISEMENT

ಹುಬ್ಬಳ್ಳಿ| ಪೌರತ್ವ ಕಾಯ್ದೆ ವಿರೋಧಿಸಿ ಪೌರ ಕಾರ್ಮಿಕ ಸಂಘಟನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 15:59 IST
Last Updated 22 ಜನವರಿ 2020, 15:59 IST
ಹುಬ್ಬಳ್ಳಿಯ ಮಿನಿವಿಧಾನ ಸೌಧದ ಎದುರು ಪೌರ ಕಾರ್ಮಿಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು
ಹುಬ್ಬಳ್ಳಿಯ ಮಿನಿವಿಧಾನ ಸೌಧದ ಎದುರು ಪೌರ ಕಾರ್ಮಿಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆ ರದ್ದು ಪಡಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ಸದಸ್ಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡ ಪಿತಾಂಬ್ರಪ್ಪ ಬಿಳಾರ ಮಾತನಾಡಿ, ‘ಮುಸ್ಲಿಂ ಹಾಗೂ ದಲಿತ ಸಮುದಾಯವನ್ನು ಹತ್ತಿಕ್ಕಬೇಕೆನ್ನುವ ಏಕೈಕ ಉದ್ದೇಶದಿಂದ ಕಾಯ್ದೆ ತಂದಿದೆ’ ಎಂದು ಆರೋಪಿಸಿದರು.

ADVERTISEMENT

ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ, ಅನ್ವರ್ ಮುಧೋಳ, ಮೋಹನ ಹಿರೇಮನಿ, ಗಾಳೆಪ್ಪ ದ್ವಾಸಲಕೇರಿ, ಕಸ್ತೂರೆವ್ವ ಬೆಳಗುಂದಿ, ಗಂಗಮ್ಮ ಸಿಂದ್ರಾಮಪುರ, ನಾಗಮ್ಮ ಗೊಲ್ಲರ, ಕನಕಪ್ಪ ಕೊಟಬಾಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.