ADVERTISEMENT

ಧಾರವಾಡ: ಎಂಸ್‍ಪಿ ಕಾನೂನುಬದ್ಧಗೊಳಿಸಲು ಆಗ್ರಹ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:41 IST
Last Updated 16 ಜುಲೈ 2024, 14:41 IST
ಹುಬ್ಬಳ್ಳಿ ತಾಲ್ಲೂಕಿನ ಭಂಡಿವಾಡದಲ್ಲಿ ಎಐಕೆಕೆಎಂಎಸ್‌ ಧಾರವಾಡ ತಾಲ್ಲೂಕು ಘಟಕದವರು ಪ್ರತಿಭಟನೆ ನಡೆಸಿದರು
ಹುಬ್ಬಳ್ಳಿ ತಾಲ್ಲೂಕಿನ ಭಂಡಿವಾಡದಲ್ಲಿ ಎಐಕೆಕೆಎಂಎಸ್‌ ಧಾರವಾಡ ತಾಲ್ಲೂಕು ಘಟಕದವರು ಪ್ರತಿಭಟನೆ ನಡೆಸಿದರು   

ಧಾರವಾಡ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಸ್‍ಪಿ)ಯನ್ನು ಕಾನೂನುಬದ್ಧಗೊಳಿಸಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಧಾರವಾಡ ತಾಲ್ಲೂಕು ಸಮಿತಿಯುವರು ಹುಬ್ಬಳ್ಳಿ ತಾಲ್ಲೂಕಿನ ಭಂಡಿವಾಡದಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯುತ್ ಮಸೂದೆ 2023 ಕೈಬಿಡಬೇಕು. . ರೈತರ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಕೂಲಿ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. .

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಶರಣಬಸವ ಗೋನವಾರ ರಾಮಣ್ಣ ಗಾಣಗೇರ, ಶಿವಪ್ಪ, ನಿಂಗಪ್ಪ ಹಕ್ಕಿ,ಈರಣ್ಣ ಡಿಂಗಿ, ಹನುಮಂತ ಹುಲ್ಲೂರು, ಚನ್ನಪ್ಪ ಹುಲ್ಲೂರು, ಮಹಾದೇವಪ್ಪ ಹುಚ್ಚಣ್ಣನ್ನವರ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.