ADVERTISEMENT

ಪೌಷ್ಟಿಕ ಆಹಾರ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 3:56 IST
Last Updated 20 ಜೂನ್ 2022, 3:56 IST
ಕುಂದಗೋಳ ತಾಲ್ಲೂಕಿನ ಗೌಡಗೇರಿ ಗ್ರಾಮದಲ್ಲಿ ದುಡಿಯುವ ಕೂಲಿಕಾರರ ಮಕ್ಕಳ ಶಿಶು ಪಾಲನಾ ಕೇಂದ್ರಕ್ಕೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತೆ ಶಿಲ್ಪಾ ನಾಗ್ ಭೇಟಿ ನೀಡಿ ಪರಿಶೀಲಿಸಿದರು
ಕುಂದಗೋಳ ತಾಲ್ಲೂಕಿನ ಗೌಡಗೇರಿ ಗ್ರಾಮದಲ್ಲಿ ದುಡಿಯುವ ಕೂಲಿಕಾರರ ಮಕ್ಕಳ ಶಿಶು ಪಾಲನಾ ಕೇಂದ್ರಕ್ಕೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತೆ ಶಿಲ್ಪಾ ನಾಗ್ ಭೇಟಿ ನೀಡಿ ಪರಿಶೀಲಿಸಿದರು   

ಕುಂದಗೋಳ: ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮವಾದ ಪೌಷ್ಟಿಕ ಆಹಾರ ನೀಡಲು ಹಾಗೂ ಅಂಗನವಾಡಿಗಳಲ್ಲಿ ಕಿಚನ್ ಗಾರ್ಡನ್ ನಿರ್ಮಾಣ ಮಾಡುವಂತೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತೆ ಶಿಲ್ಪಾ ನಾಗ್ ಹೇಳಿದರು.

ತಾಲ್ಲೂಕಿನ ಗೌಡಗೇರಿ ಗ್ರಾಮದಲ್ಲಿ ದುಡಿಯುವ ಕೂಲಿಕಾರರ ಮಕ್ಕಳಿಗೆ ಪಾಲನೆ ಮಾಡಲು ನಿರ್ಮಿಸಿರುವ ಜಿಲ್ಲೆಯ ಪ್ರಥಮ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎಚ್. ಕುಕುನೂರು, ರೇಖಾ ಡೊಳ್ಳಿನ, ಸುರೇಶ್ ಇಟ್ನಾಳ, ಪ್ರಿಯಾಂಕಾ ಮೇರಿ, ಮಹೇಶ್ ಕುರಿ, ಅನ್ನಪೂರ್ಣ ಸಂಗಳದ, ಅಜಯ್ ಎನ್, ಸುನಿಲ್ ಕಾಂಬಳೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಮತ್ತು ನಾಗರಿಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT