ADVERTISEMENT

ನ್ಯಾಮತಿ: ಹೆಬ್ಬಾವು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್‌ ಕಿರಣ್‌

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 16:58 IST
Last Updated 27 ಜುಲೈ 2021, 16:58 IST
ಹೆಬ್ಬಾವು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್‌ ಕಿರಣ್‌
ಹೆಬ್ಬಾವು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್‌ ಕಿರಣ್‌   

ನ್ಯಾಮತಿ: ತಾಲ್ಲೂಕಿನ ಫಲವನಹಳ್ಳಿ ಗ್ರಾಮದ ರೈತರೊಬ್ಬರ ಶುಂಠಿ ಹೊಲದಲ್ಲಿ ಭಾರಿ ಗಾತ್ರದ ಹೆಬ್ಬಾವು ಮಂಗಳವಾರ ಕಂಡು ಬಂದಿದ್ದು, ಅರಣ್ಯ ಇಲಾಖೆಯ ಸಹಕಾರದೊಂದಿಗೆ ಅದನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಹೆಬ್ಬಾವು ಕಾಣಿಸಿಕೊಂಡ ತಕ್ಷಣವೇ ರೈತರು ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಬಳಿಕ ಶಿವಮೊಗ್ಗದ ಸ್ನೇಕ್‌ ಕಿರಣ್‌ ಅವರನ್ನು ಕರೆಸಿಕೊಳ್ಳಲಾಯಿತು. ಸ್ನೇಕ್‌ ಕಿರಣ್‌ ಅವರು ಹೆಬ್ಬಾವನ್ನು ಹಿಡಿದಾಗ ಗ್ರಾಮಸ್ಥರು ಮೊಬೈಲ್‌ಗಳಲ್ಲಿ ಫೋಟೊ ಹೊಡೆದುಕೊಂಡು ಸಂಭ್ರಮಿಸಿದರು. ಬಳಿಕ ಅರಣ್ಯಕ್ಕೆ ತೆಗೆದುಕೊಂಡು ಹೋಗಿ ಬಿಡಲಾಯಿತು. ಹೆಬ್ಬಾವು 8 ಅಡಿ ಉದ್ದ ಹಾಗೂ 20 ಕೆ.ಜಿ. ತೂಕವಿತ್ತು.

ಉಪವಲಯ ಅರಣ್ಯಾಧಿಕಾರಿ ಎಚ್.ಕೃಷ್ಣಮೂರ್ತಿ, ಅರಣ್ಯ ರಕ್ಷಕ ನಿಂಗರಾಜ ಹರವಿ, ಅರಣ್ಯ ವೀಕ್ಷಕ ಬಸವರಾಜಪ್ಪ, ಚಂದ್ರಪ್ಪ ಅವರೂ ಕಾರ್ಯಾಚರಣೆಯಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.