ADVERTISEMENT

ಬಸವ ಜಯಂತಿ: ಹುಬ್ಬಳ್ಳಿಯಿಂದ ಕೂಡಲಸಂಗಮದತ್ತ ಹೊರಟ ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 6:17 IST
Last Updated 23 ಏಪ್ರಿಲ್ 2023, 6:17 IST
   

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸ್ಥಳೀಯ ನಾಯಕರಾದ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ ಸೇರಿದಂತೆ ವಿವಿಧ ನಾಯಕರು ಸ್ವಾಗತಿಸಿದರು.

ನಿಲ್ದಾಣದಲ್ಲಿ ರಾಹುಲ್ ಅವರು ಶೆಟ್ಟರ್ ಮತ್ತು ಅಬ್ಬಯ್ಯ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ನಂತರ ಕೂಡಲ ಸಂಗಮಕ್ಕೆ ಹೆಲಿಕಾಪ್ಟರ್ ನಲ್ಲಿ ಕೂಡಲಸಂಗಮಕ್ಕೆ ತೆರಳಿದರು. ಅಲ್ಲಿ ಬಸವ ಧರ್ಮ ಪೀಠ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT