ಹುಬ್ಬಳ್ಳಿ: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಮೋಡಕವಿದ ಹಾಗೂ ತಣ್ಣನೆಯ ವಾತಾವರಣವಿದ್ದು, ಗುರುವಾರ ಬೆಳಿಗ್ಗೆಯಿಂದ ಜಿಟಿ, ಜಿಟಿ ಮಳೆ ಆರಂಭವಾಗಿದೆ.
ಇದರಿಂದಾಗಿ ಹಾಲು ಹಾಕುವವರು ಹಾಗೂ ಪತ್ರಿಕೆ ಹಂಚುವ ಹುಡುಗರು ತಮ್ಮ ನಿತ್ಯದ ಕಾಯಕವನ್ನು ಮಳೆಯಲ್ಲೇ ಮಾಡಬೇಕಾಯಿತು.
ಬೆಳಿಗ್ಗೆ 6.45ರಿಂದ 9 ಗಂಟೆ ತನಕ:ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಬೇಕಿತ್ತು. ಇದಕ್ಕಾಗಿ ಅವರು ಬುಧವಾರ ರಾತ್ರಿಯೇ ಹುಬ್ಬಳ್ಳಿಗೆ ಬಂದು ಹೋಟೆಲ್ ನಲ್ಲಿ ತಂಗಿದ್ದರು. ಮಳೆಯ ಕಾರಣ ಪರಿಶೀಲನೆಯನ್ನು ಮುಂದೂಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.