ADVERTISEMENT

ಹುಬ್ಬಳ್ಳಿಯಲ್ಲಿ ಬಿಡುವು ನೀಡಿದ ವರುಣ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 5:22 IST
Last Updated 6 ಆಗಸ್ಟ್ 2020, 5:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಒಂದು ವಾರದಿಂದ ಮೇಲಿಂದ ಮೇಲೆ‌ ನಗರದಲ್ಲಿ ಸುರಿದಿದ್ದ ಮಳೆ ಗುರುವಾರ ಬೆಳಿಗ್ಗೆ ಬಿಡುವು ನೀಡಿದೆ.

ಬುಧವಾರ ಬೆಳಗಿನ ಜಾವವೇ ಶುರುವಾಗಿದ್ದ‌ ಮಳೆ ಮಧ್ಯರಾತ್ರಿಯ ತನಕವೂ ಮುಂದುವರಿದಿತ್ತು. ಇದರಿಂದ ನಗರದ ಪ್ರಮುಖ‌‌ ಉಣಕಲ್ ಕೆರೆ ಕೋಡಿ ಬಿದ್ದಿತ್ತು‌. ನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದಲ್ಲಿ ಒಟ್ಟು 11 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮಳೆಯಿಂದ ನಿತ್ಯದ ಚಟುವಟಿಕೆಗಳಿಗೂ ತೊಂದರೆಯಾಗಿತ್ತು.

ಗುರುವಾರ ಬೆಳಗಿನ ಜಾವ ಬಂದ ವರುಣ ಈಗ ಸ್ವಲ್ಪ ಬಿಡುವು ನೀಡಿದ್ದಾನೆ. ಬಿಸಿಲು ಕೂಡ ಬಿದ್ದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.