ADVERTISEMENT

ದೇವೇಗೌಡರ ಅಪಹಾಸ್ಯ ಸಲ್ಲ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 14:12 IST
Last Updated 3 ಜುಲೈ 2022, 14:12 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಹುಬ್ಬಳ್ಳಿ: ‘ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರ ವಯಸ್ಸು ಹಾಗೂ ಶಕ್ತಿಯ ಕುರಿತು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಅಪಹಾಸ್ಯದ ಮಾತುಗಳನ್ನಾಡಿರುವುದು ಸರಿಯಲ್ಲ. ಈ ಬಗ್ಗೆ ಕೂಡಲೇ ಅವರು ಕ್ಷಮೆ ಯಾಚಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇವೇಗೌಡ ಅವರು ಪ್ರಧಾನಿ ಹುದ್ದೆಗೇರಿದ ಏಕೈಕ ಕನ್ನಡಿಗ. ಸುದೀರ್ಘ ಕಾಲದ ಅವರ ರಾಜಕೀಯ ಅನುಭವವನ್ನು ನಾಡು ಪಕ್ಷಾತೀತವಾಗಿ ಗೌರವಿಸಬೇಕು. ರಾಜಣ್ಣ ಅವರು ಹಿರಿಯರ ಕುರಿತು ಹೇಳಿಕೆ ನೀಡುವಾಗ ಅಪಹಾಸ್ಯ ಮಾಡಬಾರದು. ರಾಜಕಾರಣಿಗಳ ನಡೆ ನೈತಿಕತೆಯ ಎಲ್ಲೆ ಮೀರಬಾರದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT