ಹುಬ್ಬಳ್ಳಿ: ರಾಮ ನವಮಿಯನ್ನು ಹುಬ್ಬಳ್ಳಿಯಲ್ಲಿ ಶನಿವಾರ ಭಕ್ತಿ ಭಾವದಿಂದ ಆಚರಿಸಲಾಯಿತು. ಮಂದಿರಗಳಿಗೆ ತೆರಳಿದ ಭಕ್ತರು ಪೂಜೆ ಸಲ್ಲಿಸಿದರು.
ಹುಬ್ಬಳ್ಳಿ ಕೋರ್ಟ್ ವೃತ್ತದ ಸಮೀಪ ಸಾಯಿ ಮಂದಿರದಲ್ಲಿ ರಾಮ ನವಮಿ ಅಂಗವಾಗಿ ವಿಶೇಷ ತೊಟ್ಟಿಲ ಪೂಜೆ ನಡೆಯಿತು. ಸಾಯಿ ಬಾಬಾಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾವಿರಾರು ಮಂದಿ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಹುಬ್ಬಳ್ಳಿಯ ಕಮರಿಪೇಟೆಯ ರಾಮಮಂದಿರದಲ್ಲಿ ದೇವರಿಗೆ ಆಕರ್ಷಕ ಅಲಂಕಾರ ಮಾಡಲಾಗಿತ್ತು. ತೊಟ್ಟಿಲ ಪೂಜೆಯಲ್ಲಿ ಭಕ್ತರು ಪಾಲ್ಗೊಂಡರು. ದಾಜಿಬಾನ ಪೇಟೆಯ ಗೌಳಿ ಗಲ್ಲಿ ಎರಡನೇ ತಿರುವಿನಲ್ಲಿರುವ ರಾಮ ಮಂದಿರದಲ್ಲಿ ಭಜನೆ ನಡೆಯಿತು. ಹುಬ್ಬಳ್ಳಿಯ ಶಿರಡಿನಗರದಲ್ಲಿರುವ ಸಾಯಿ ಬಾಬಾಗೆ ಶ್ರೀರಾಮನ ಅಲಂಕಾರ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.