ADVERTISEMENT

ಹುಬ್ಬಳ್ಳಿ: ರಂಭಾಪುರಿ ಶ್ರೀಗಳ ಅದ್ಧೂರಿ ಅಡ್ಡಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 8:55 IST
Last Updated 4 ಏಪ್ರಿಲ್ 2022, 8:55 IST
ರಂಭಾಪುರಿ ಶ್ರೀಗಳ ಅದ್ಧೂರಿ ಅಡ್ಡಪಲ್ಲಕ್ಕಿ ಉತ್ಸವ
ರಂಭಾಪುರಿ ಶ್ರೀಗಳ ಅದ್ಧೂರಿ ಅಡ್ಡಪಲ್ಲಕ್ಕಿ ಉತ್ಸವ   

ಹುಬ್ಬಳ್ಳಿ: ನಗರದ ಹಿರೆಪೇಟೆಯಲ್ಲಿ ಸೋಮವಾರ ಬಾಳೆಹೊನ್ನೂರಿನ‌ ರಂಭಾಪುರಿ ವೀರಗಂಗಾಧರ ಸೋಮೇಶ್ವರ ಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನಡೆಯಿತು.

ಅಶ್ವ, ಗಜ ಹಾಗೂ ಡೋಲು ವಾದ್ಯ ಮೇಳದೊಂದಿಗೆ ಸಾಗಿದ ಮೆರವಣಿಗೆಗೆ ವೀರಗಾಸೆ ಕಲಾವಿದರ ಕುಣಿತವು ವಿಶೇಷ ಮೆರಗು ತಂದಿತು.

ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು‌. ಮೆರವಣಿಗೆಯ ಮಾರ್ಗದುದ್ದಕ್ಕೂ ಭಕ್ತರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಉತ್ಸವದ ಅಂಗವಾಗಿ ಹಿರೇಪೇಟೆಯ ಬೀದಿಗಳನ್ನು ಸ್ವಚ್ಛಗೊಳಿಸಿ, ರಂಗೋಲಿ ಬಿಡಿಸಿ ಸಿಂಗರಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.