ADVERTISEMENT

ಅತ್ಯಾಚಾರ; ಆರೋಪಿ ಕಾಲಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 4 ಮೇ 2024, 22:03 IST
Last Updated 4 ಮೇ 2024, 22:03 IST
ಸದ್ದಾಂ ಹುಸೇನ್‌
ಸದ್ದಾಂ ಹುಸೇನ್‌   

ಹುಬ್ಬಳ್ಳಿ: ನಗರದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸಲು ಕಾರಣನಾದ ಆರೋಪಿ ಸದ್ದಾಂ ಹುಸೇನ್ ಶುಕ್ರವಾರ ತಡರಾತ್ರಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

‘ತನಿಖೆಗಾಗಿ ಠಾಣೆಗೆ ಕರೆದೊಯ್ಯುವಾಗ, ಸದ್ದಾಂ ಹುಸೇನ್ ಪೊಲೀಸರಿಗೆ ಇರಿದು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಗುಂಡು ಹಾರಿಸಲಾಯಿತು. ಗಾಯಾಳುಗಳಾದ ಸದ್ದಾಂ ಹುಸೇನ್‌, ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂಗಮೇಶ ಹಾಗೂ ಕಾನ್‌ಸ್ಟೆಬಲ್‌ ಅರುಣ್‌ ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಂಧನ ಪ್ರಕ್ರಿಯೆಗೆ ಪೂರಕವಾಗಿ ರಾತ್ರಿ 12.10ಕ್ಕೆ ಸುತಗಟ್ಟಿ ಗ್ರಾಮಕ್ಕೆ ಪೊಲೀಸರು ತೆರಳಿದ ಸಂದರ್ಭದಲ್ಲಿ ಸದ್ದಾಂ ಹುಸೇನ್ ಬಟನ್‌ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ. ಆತ್ಮರಕ್ಷಣೆಗಾಗಿ ವಿದ್ಯಾಗಿರಿ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಸಂಗಮೇಶ ಡಿಂಗಿನಾಳ ಒಂದು ಗುಂಡು ಗಾಳಿಯಲ್ಲಿ ಹಾರಿಸಿ, ಇನ್ನೊಂದು ಗುಂಡನ್ನು ಅವನ ಎಡಗಾಲಿಗೆ ಹೊಡೆದರು’ ಎಂದು ಪೊಲೀಸ್‌ ಕಮಿಷನರ್‌ ರೇಣುಕಾ ಸುಕುಮಾರ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.