ADVERTISEMENT

ಆಟೊ ಚಾಲಕರ ಬಂದ್‌ಗೆ ಬೆಂಬಲ ಇಲ್ಲ; ಉಳ್ಳಿಕಾಶಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 16:00 IST
Last Updated 30 ಜುಲೈ 2023, 16:00 IST

ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೊ ರಿಕ್ಷಾ ಚಾಲಕರ ಸಂಘ ಮತ್ತು ಹುಬ್ಬಳ್ಳಿ ಧಾರವಾಡ ಆಟೊ ಚಾಲಕರ ಒಕ್ಕೂಟ ಜುಲೈ 31ರಂದು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹೇಳಿದೆ.

 ‘ಆಟೊ ಚಾಲಕರ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಲು ಮಹಾಮಂಡಳ ಸಹಕಾರ ನೀಡಲಿದೆ. ಈ ಬಂದ್‌ ಅನವಶ್ಯಕ. ಇದನ್ನು ಕೈಬಿಡಬೇಕು. ಜನಪರವಾದ ‘ಶಕ್ತಿ’ ಯೋಜನೆ ವಿರೋಧಿಸುವುದು ಸರಿಯಲ್ಲ’ ಎಂದು ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT