ADVERTISEMENT

ಪೌರಕಾರ್ಮಿಕರಿಗೆ ಸೌಲಭ್ಯ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 5:16 IST
Last Updated 26 ಏಪ್ರಿಲ್ 2022, 5:16 IST

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಪಾಲಿಕೆಯ ‍ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದನ್ವಯ ಸೌಲಭ್ಯ ನೀಡಬೇಕು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದ ಸದಸ್ಯರುಕರ್ನಾಟಕ ರಾಜ್ಯ ಸಫಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಅವರಿಗೆ ಮನವಿ ಸಲ್ಲಿಸಿದರು.

ಎಲ್ಲ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ₹3ರಿಂದ ₹5 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯ ಕಲ್ಪಿಸಬೇಕು. ಬೆಳಿಗಿನ ಉಪಾಹಾರ ದರವನ್ನು ₹ 20ರಿಂದ ₹35ಕ್ಕೆ ಹೆಚ್ಚಿಸಬೇಕು. ಮಾಸಿಕ ₹2 ಸಾವಿರ ಸಂಕಷ್ಟ ಭತ್ಯೆ ನೀಡಬೇಕು. ತುಟ್ಟಿ ಭತ್ಯೆಯನ್ನು ಮಾಸಿಕ ವೇತನದಲ್ಲಿ ಸೇರಿಸಿ ಪಾವತಿಸಬೇಕು ಸಂಘದಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಗುಂಟ್ರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT