ADVERTISEMENT

ರಾತ್ರಿ 12ರ ವರೆಗೆ ಕರ್ತವ್ಯ ನಿರ್ವಹಿಸಿ ಅಧಿಕಾರ ಹಸ್ತಾಂತರಿಸಿದ ಆಯುಷ್ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 12:26 IST
Last Updated 1 ಜೂನ್ 2020, 12:26 IST
ಧಾರವಾಡ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಗಮೇಶ ಕಲಹಾಳ ಅವರು ತಮ್ಮ ಸೇವಾ ನಿವೃತ್ತಿ ನಂತರ ಹಿರಿಯ ವ್ಯೆದ್ಯಾಧಿಕಾರಿ ಡಾ. ಮೀನಾಕ್ಷಿ ಅವಲೂರು ಅವರಿಗೆ ಅಧಿಕಾರ ಹಸ್ತಾಂತರಿಸಿದರು 
ಧಾರವಾಡ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಗಮೇಶ ಕಲಹಾಳ ಅವರು ತಮ್ಮ ಸೇವಾ ನಿವೃತ್ತಿ ನಂತರ ಹಿರಿಯ ವ್ಯೆದ್ಯಾಧಿಕಾರಿ ಡಾ. ಮೀನಾಕ್ಷಿ ಅವಲೂರು ಅವರಿಗೆ ಅಧಿಕಾರ ಹಸ್ತಾಂತರಿಸಿದರು    

ಧಾರವಾಡ:ಜಿಲ್ಲಾ ಆಯುಷ್ಅಧಿಕಾರಿ ಡಾ. ಸಂಗಮೇಶ ಕಲಹಾಳ ಅವರು ತಮ್ಮ ಸೇವಾ ನಿವೃತ್ತಿಯಕೊನೆಯಗಳಿಗೆಯವರೆಗೂ ಕರ್ತವ್ಯ ನಿರ್ವಹಿಸಿ ಮೇ 31ರ ಮಧ್ಯ ರಾತ್ರಿ 12ಕ್ಕೆ ಗಂಟೆಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಹುದ್ದೆಯ ಆಡಳಿತಾತ್ಮಕ ಕಾರ್ಯಭಾರವನ್ನು ಡಾ. ಎಸ್.ಸುಮಂಗಲಾ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸರ್ಕಾರದ ನಿಯಮದಂತೆ ಒಂದು ದಿನವೆಂದರೆ ಮಧ್ಯರಾತ್ರಿ 12 ರಿಂದ ಮುಂದಿನ ದಿನದ ಮಧ್ಯರಾತ್ರಿ 12ರ ವರೆಗೆ ಎಂದು ಹೇಳಲಾಗಿದೆ. ಒಂದು ದಿನದ ವೇತನವೆಂದರೆ 24 ಗಂಟೆಗಳಿಗೆ ನೀಡುವಂತಹದ್ದು. ಹೀಗಾಗಿ ನಾನು ನನ್ನ ವೃತ್ತಿ ಜೀವನದ ಕೊನೆಯ ಗಳಿಗೆಯವರೆಗೂ ಕೆಲಸ ಮಾಡಿ ಅಧಿಕಾರ ಹಸ್ತಾಂತರಿಸಿದ್ದೇನೆ’ ಎಂದರು.

ಮಧ್ಯರಾತ್ರಿ 12ಕ್ಕೆ ಜಿಲ್ಲಾ ಆಯುಷ್ ಅಧಿಕಾರಿ ಹುದ್ದೆಯ ಕಾರ್ಯಭಾರವನ್ನು ಹಿರಿಯ ವ್ಯೆದ್ಯಾಧಿಕಾರಿ ಡಾ. ಮೀನಾಕ್ಷಿ ಅವಲೂರು ಅವರಿಗೆ ವಹಿಸಿದರು.

ADVERTISEMENT

ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಬಿ.ಪಿ. ಪೂಜಾರಿ, ಸಹಾಯಕ ಆಡಳಿತಾಧಿಕಾರಿ ಅಶೋಕ ಅಕ್ಕೇರಿ, ಆಯುಷ್ ಇಲಾಖೆ ವ್ಯೆದ್ಯಾಧಿಕಾರಿಗಳಾದ ಡಾ. ಎ.ಎಸ್‌. ಮಲ್ಲಿಕಾರ್ಜುನ, ಡಾ. ನಿಂಗಪ್ಪ ಕಿನ್ನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.