ADVERTISEMENT

ಆರ್‌ಎಸ್‌ಎಸ್‌ನಿಂದ ಪಥ ಸಂಚಲನ; ಸಚಿವ ಜೋಶಿ, ಬಿಜೆಪಿ ನಾಯಕರು ಭಾಗಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 12:31 IST
Last Updated 9 ಅಕ್ಟೋಬರ್ 2022, 12:31 IST
ಆರ್‌ಎಸ್‌ಎಸ್‌ನಿಂದ ಪಥ ಸಂಚಲನ
ಆರ್‌ಎಸ್‌ಎಸ್‌ನಿಂದ ಪಥ ಸಂಚಲನ   

ಹುಬ್ಬಳ್ಳಿ: ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಹುಬ್ಬಳ್ಳಿಯ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಗಣಧಾರಿ ಕಾರ್ಯಕರ್ತರು ಪಥ ಸಂಚಲನ ನಡೆಸಿದರು.

ನೆಹರೂ ಮೈದಾನದಿಂದ ಹೊರಟ ಪಥ ಸಂಚಲನ ಕೊಪ್ಪಿಕರ ರಸ್ತೆ, ಬ್ರಾಡ್ ವೇ, ದುರ್ಗದ ಬೈಲ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ, ಮರಳಿ ಮೈದಾನ ತಲುಪಿತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್‌ ಮುಖಂಡರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.