ADVERTISEMENT

ಸರ್ಕಸ್ ಮಾಡಿ ಸರ್ಕಾರ ನಡೆಸುತ್ತಿದ್ದೇವೆ: ಜಗದೀಶ ಶೆಟ್ಟರ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:23 IST
Last Updated 29 ಸೆಪ್ಟೆಂಬರ್ 2020, 21:23 IST
ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್ ಶೆಟ್ಟರ್   

ಹುಬ್ಬಳ್ಳಿ: ‘ಸರ್ಕಸ್ ಮಾಡಿ ರಾಜ್ಯ ಸರ್ಕಾರ ನಡೆಸುತ್ತಿದ್ದೇವೆ. ಬೇರೆ ಪಕ್ಷಗಳಿಂದ ಬಂದವರು, ಬಿಜೆಪಿಯೊಳಗಿನ ಹಿರಿಯರು ಸೇರಿದಂತೆ ಹಲವರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆ ವಿಷಯವನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗಿದೆ. ಅವರು ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು, ಯಾರೂ ನನ್ನ ಅಭಿಪ್ರಾಯ ಕೇಳಿಲ್ಲ. ನಾನು ಕೂಡ ಏನನ್ನು ಹೇಳುವ ಪರಿಸ್ಥಿತಿಯಲ್ಲಿಲ್ಲ’ ಎಂದರು.

‘ಶಾಲೆ ತೆರೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವಿದೆ. ಆದರೆ, ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಇನ್ನೂ ಆತಂಕವಿದೆ. ಹಾಗಾಗಿ, ಏಕಾಏಕಿ ಶಾಲೆಗಳನ್ನು ಆರಂಭಿಸುವುದು ಬೇಡ. ಬದಲಿಗೆ, ಪ್ರಾಯೋಗಿಕವಾಗಿ ಕೆಲ ಶಾಲೆಗಳನ್ನು ಆರಂಭಿಸಲಿ’ ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.