ಕಲಘಟಗಿ: ಸಚಿವ ಸಂತೋಷ ಲಾಡ್ ಅವರ 49ನೇ ಜನ್ಮದಿನ ಸಂಭ್ರಮವನ್ನು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಸಂತೋಷ ಲಾಡ್ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ಗಾತ್ರದ ಕೆಕ್ ಕತ್ತಿರಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ಸರ್ಕಾರಿ ಪ್ರೌಢ ಶಾಲೆಗಳಿಗೆ ತೆರಳಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪ್ರಶ್ನೆ ಪತ್ರಿಕೆಯ ಪುಸ್ತಕ, ತಾಲ್ಲೂಕ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು.
ಸಚಿವರ ಆಪ್ತ ಕಾರ್ಯದರ್ಶಿ ಹರೀಶ ಮಠದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್.ಆರ್. ಪಾಟೀಲ, ಬಾಳು ಖಾನಾಪುರ, ನರೇಶ ಮಲೆನಾಡು, ಬಾಬು ಅಂಚಟಗೇರಿ, ಮಹೇಶ ಅಲಗೂರು, ವೃಷಬೇಂದ್ರ ಪಟ್ಟಣಶೆಟ್ಟಿ,ಬಾಳು ಕಾನಾಪುರ,ಗಂಗಾಧರ ಚಿಕ್ಕಮಠ, ಹನುಮಂತ ಚವರಗುಡ್ಡ,ಶಿವಲಿಂಗ ಮುಗಣ್ಣವರ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.