ಹುಬ್ಬಳ್ಳಿ:ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ವಿರೋಧಿಸಿ ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಹೇಳಿದರು.
ಮಹದಾಯಿ ನದಿ ನೀರಿನ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ದೂರಿದರು.
ಬೆಳಗಾವಿಯಲ್ಲಿ ಮಠಾಧೀಶರು ನಡೆಸುತ್ತಿರುವ ಹೋರಾಟಕ್ಕೂ ಬೆಂಬಲ ನೀಡಲಾಗುವುದು. ಹೋರಾಟವನ್ನು ಜನಪ್ರತಿನಿಧಿಗಳು ಬೆಂಬಲಿಸದಿದ್ದರೆ ಅವರ ಮನೆ ಮುಂದೆ ಧರಣಿ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.